Breaking News

ದಂಪತಿಗಳ ಸಾವು ಆತ್ಮಹತ್ಯೆ ಅಲ್ಲ ಕೊಲೆ ಶಂಕೆ : ಎಸ್ ಪಿ ಗುಳೇದ

Spread the love

ದಂಪತಿಗಳ ಸಾವು ಆತ್ಮಹತ್ಯೆ ಅಲ್ಲ ಕೊಲೆ ಶಂಕೆ : ಎಸ್ ಪಿ ಗುಳೇದ

ವರದಿ: ವಿಲಾಸ ಕಾಂಬಳೆ

ಅಥಣಿ : ನಿನ್ನೆ ಕೊಳೆತ ಸ್ಥಿತಿಯಲ್ಲಿ ದೊರೆತ ದಂಪತಿಗಳ ಶವದ ಹಿಂದೆ ಹಲವು ಅನುಮಾನಗಳು ಮೂಡಿಸಿದ್ದು ಇದು ಆತ್ಮ ಹತ್ಯೆಯಲ್ಲ ಕೊಲೆ ಎಂದು ಶಂಕೆ ವ್ಯಕ್ತವಾಗುತ್ತಿದೆ

ಪಟ್ಟಣದ ಹೊರವಲಯದ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ಚವ್ಹಾಣ ತೋಟದಲ್ಲಿ ದೊರೆತ ದಂಪತಿಗಳನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಥಣಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತ ದೇಹಗಳನ್ನ ಸಂಬಂಧಿಕರಿಗೆ ಹಸ್ತಾಂತರಿಸಿದ್ದು ಸ್ಥಳೀಯರ ಹೇಳಿಕೆ ಪ್ರಕಾರ ಮಗನ ಕೊರಗಿನಲ್ಲಿ ಆತ್ಮ ಹತ್ಯ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಅನುಮಾನಗೊಂಡ ಪೊಲೀಸರು ತನಿಖೆ ಚುರುಕು ಗೊಳಿಸಿದ್ದು ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ ಭೀಮಾಶಂಕರ ಗುಳೇದ ಭೇಟಿ ನೀಡಿ ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಗಡುಕರು ಕಲ್ಲಿನಿಂದ ಬಾಗಿಲು ಮುರಿದು ಒಳಗೆ ಹೋಗಿ ಅವರನ್ನ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ. ಈ ಘಟನೆಗೆ ಸಂಭಂದಿಸಿದಂತೆ ಪೊಲೀಸರು ತನಿಖೆ ಚುರುಕುಗೂಳಿಸಿದ್ದು ಆದಷ್ಟು ಬೇಗ ಕೊಲೆಗಾರರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗ್ತಾರಾ ಕಾದು ನೋಡಬೇಕಿದೆ.


Spread the love

About Fast9 News

Check Also

ಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ

Spread the loveಮೂಲಭೂತ ಸೌಕರ್ಯಗಳ ಬೇಡಿಕೆ ಈಡೆರಸಲು ಸರಕಾರದ ಬಳಿ ಹಣವಿಲ್ಲ: ಶಾಸಕ ಬಾಲಚಂದ್ರ ಜಾರಕಿಹೋಳಿ ಅಸಮಾಧಾನ ಅರಭಾವಿ – …

Leave a Reply

Your email address will not be published. Required fields are marked *