Breaking News

ಯತ್ನಾಳ ಅವರು ಎಲೆಕ್ಷನಗೆ ನಿಲ್ಲೋದಿಲ್ಲವಂತೆ,ಆದರೆ,,

Spread the love

ಯತ್ನಾಳ ಅವರು ಎಲೆಕ್ಷನಗೆ ನಿಲ್ಲೋದಿಲ್ಲವಂತೆ,ಆದರೆ,,,

ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ  ನಾನು ಸ್ಪರ್ಧಿಸುವುದಿಲ್ಲ, ಆದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ  ಕೊಪ್ಪಳ, ಬೆಳಗಾವಿ ಅಥವಾ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ತನ್ನ ಮೇಲೆ ಆಗ್ರಹವಿದ್ದರೂ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಆದರೆ 28 ಕ್ಷೇತ್ರಗಳಲ್ಲಿ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಪಕ್ಷದ ಕಾರ್ಯಕರ್ತರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದರು.

ಭಿನ್ನಾಭಿಪ್ರಾಯಗಳು ಎಲ್ಲ ಪಕ್ಷಗಳಲ್ಲಿ ಇರುತ್ತವೆ. ಆದರೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ, ನರೇಂದ್ರ ಮೋದಿಯವರು 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕಿದೆ. ಇದು ದೇಶದ ಚುನಾವಣೆಯಾಗಿರುವುದರಿಂದ ಮತ್ತು ಮೋದಿಯವರು ಪ್ರಧಾಮಂತ್ರಿಯಾಗುವುದು ಮುಖ್ಯವಾಗಿರುವುದರಿಂದ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.


Spread the love

About Fast9 News

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *