Breaking News

ಇಂದು CM ಯಡಿಯೂರಪ್ಪ ನಾಳೆ ಡಿಕೆ ಶಿವಕುಮಾರ ಬೆಳಗಾವಿಗೆ ಯಾಕೆ ?:

Spread the love

ಬೆಳಗಾವಿ : ಇಂದು, ನಾಳೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು
ಬಿಜೆಪಿ ಕಾರ್ಯಕಾರಿಣಿ ಸಭೆಗೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ ವೇಳೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆ ಮಾತನಾಡಿದ್ದಾರೆ.
ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಉಪಚುನಾವಣೆಯಲ್ಲಿ ನಡೆಯುವ ಈ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ಜತೆಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕಮಲ ಪಕ್ಷವೇ ಅತೀ ಹೆಚ್ಚಿನ ಸ್ಥಾನ ಗಳಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಾಳೆ ಶನಿವಾರ ಡಿಕೆಶಿ ಬೆಳಗಾವಿಗೆ

ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಅವರು ನಾಳೆ ಶನಿವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಅವರು ಸಾಂಬ್ರಾ ವಿಮಾನ ನಿಲ್ಧಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾಲಿಂಗಪೂರ ಸೇರಿದಂತೆ ವಿವಿಧ ನಗರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.


Spread the love

About Fast9 News

Check Also

ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ

Spread the love  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು …

Leave a Reply

Your email address will not be published. Required fields are marked *