Breaking News

ಯಡಿಯೂರಪ್ಪನವರಿಂದಬೆಳಗಾವಿ ಸೇರಿ 3 ಸ್ಥಳಗಳಿಗೆ ಪ್ರವಾಸ

Spread the love

ಯಡಿಯೂರಪ್ಪನವರಿಂದಬೆಳಗಾವಿ ಸೇರಿ 3 ಸ್ಥಳಗಳಿಗೆ ಪ್ರವಾಸ

ಪಾಸ್ಟ್ 9 ಸುದ್ದಿ: ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 9ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಬೆಳಗಾವಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಿಗೆ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಯಡಿಯೂರಪ್ಪ ಪ್ರವಾಸ ಹಮ್ಮಿಕೊಂಡಿದ್ದಾರೆ.

ಇದೇ ವೇಳೆ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಯಾವುದೇ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಬಹುದೆಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಭಾಗದಲ್ಲಿ ಪ್ರವಾಸ ಹಮ್ಮಿಕೊಳ್ಳುತ್ತಿದ್ದು, ಪಕ್ಷ ಸಂಘಟನೆ ಜೊತೆಗೆ ಅಭಿವದ್ಧಿ ಕಾಮಗಾರಿ ಮೂಲಕ ಮತದಾರರನ್ನು ಸೆಳೆಯುವ ಯೋಚನೆಯನ್ನೂ ಹೊಂದಿದ್ದಾರೆ.


Spread the love

About fast9admin

Check Also

ಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ.

Spread the loveಕೊಣ್ಣೂರ ಚೆಕ್‌ ಪೊಸ್ಟಿಗೆ ತಹಸಿಲ್ದಾರ ದಿಢೀರ ಬೇಟಿ,ಪರಿಶೀಲನೆ. ಗೋಕಾಕ : ಬೆಳಗಾವಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಕೊಣ್ಣೂರ …

Leave a Reply

Your email address will not be published. Required fields are marked *