Breaking News

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ

Spread the love

ಗೋಕಾಕ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ

ಹೊಲಕ್ಕೆ ಹೊಸದಾಗಿ ಟಿಸಿ ಅಳವಡಿಸಲು ರೈತನಿಂದ ರೂ.60 ಸಾವಿರ ಲಂಚ ಪಡೆಯುತ್ತಿದ್ದ ಗೋಕಾಕ ಹೆಸ್ಕಾಂ ಉಪ ವಿಭಾಗದ ಸೆಕ್ಷನ್ ಆಫೀಸರ್ ಹಾಗೂ ಸಿಬ್ಬಂದಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಲೋಳಸೂರ ಸೆಕ್ಷನ್ ಆಫೀಸರ್ ಪ್ರಕಾಶ ಪರೀಟ, ಹಾಗೂ ಸಿಬ್ಬಂದಿ ಮಲ್ಲಯ್ಯ ಹಿರೇಮಠ ಅರೋಪಿಗಳಾಗಿದ್ದಾರೆ. ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅರಭಾವಿಯ ಆನಂದ ಧರ್ಮಟ್ಟಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ. ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಆರೋಪಿಗಳನ್ನು ಬಲೆಗೆ ಕೆಡವಿದ್ದಾರೆ,

ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಎ.ಎಸ್. ಗುದಿಗೊಪ್ಪ, ಸುನೀಲಕುಮಾರ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು

ಗೋಕಾಕ


Spread the love

About fast9admin

Check Also

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Spread the loveಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ …

Leave a Reply

Your email address will not be published. Required fields are marked *