Breaking News

ಚುನಾವಣೆಯಲ್ಲಿ ಗೆಲ್ಲಲಿಕ್ಕೆ ಆಗದೆ ಮಾಟ-ಮಂತ್ರ ಮಾಡಿದ ಕುತಂತ್ರಿ ಅಬ್ಯರ್ಥಿಗಳು.

Spread the love

ಚುನಾವಣೆಯಲ್ಲಿ ಗೆಲ್ಲಲಿಕ್ಕೆ ಆಗದೆ ಮಾಟ-ಮಂತ್ರ ಮಾಡಿದ ಕುತಂತ್ರಿ ಅಬ್ಯರ್ಥಿಗಳು

ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ಚುನಾವಣೆ ಹಿನ್ನೆಲೆ ವಾಮಾಚಾರ ಮಾಡಿದ ಘಟನೆ ನಡೆದಿದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ,ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗ್ರಾಮದ ವಾರ್ಡಿನಲ್ಲಿ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು, ಜನರು ವಾಮಾಚಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವಾಮಾಚಾರ ಬಗ್ಗೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಾಮಾಚಾರ ಮಾಡಿದವರ ವಿರುದ್ಧ ಗ್ರಾಮದ ಹನುಮಂತ ದೇವಸ್ಥಾನ ಎದುರು ನೂರಾರು ಜನ ಸೇರಿ ಧಿಕ್ಕಾರ ಕೂಗಿದರು. ಹನುಮಂತ ದೇವರು ಅವರಿಗೆ ಪಾಠ ಕಲಿಸಲಿ ಎಂದು ಪ್ರಾರ್ಥಿಸಿದರು.

ಮಾಟ-ಮಂತ್ರ ಮಾಡಿದ್ದನ್ನು ಗ್ರಾಮಸ್ಥರು ಸೇರಿ ಈ ಎಲ್ಲ ವಸ್ತುಗಳ ಚೀಲಗಳನ್ನು ದೇವರೆ ನೋಡಿಕೊಳ್ಳಲೆಂದು ಗ್ರಾಮದ ಶ್ರೀ ಹನುಮಂತ ದೇವರ ಗುಡಿಗೆ ಹೋಗಿ ಕಟ್ಟಿದ್ದಾರೆ.


Spread the love

About fast9admin

Check Also

ಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ

Spread the loveಗೋಕಾಕ ಗ್ರಾಮೀಣ ಪೋಲಿಸ ಠಾಣೆ ಪ್ರಕಟಣೆ 1) ಸಾರ್ವಜನಿಕರು ವಾಕಿಂಗ್, ಹೋಗುವಾಗ ಬಂಗಾರದ ಆಭರಣಗಳನ್ನು, ಧರಿಸಿಕೊಂಡು ಹೋಗಬೇಡಿ …

Leave a Reply

Your email address will not be published. Required fields are marked *