Breaking News

ರಾಯಬಾಗದಲ್ಲಿ ಬಾಳೆ ಹಣ್ಣು ವ್ಯಾಪಾರಿ ಮಹಿಳೆ ಮೇಲೆ ಆ್ಯಸಿಡ್​ ದಾಳಿ

Spread the love

ರಾಯಬಾಗದಲ್ಲಿ ಬಾಳೆ ಹಣ್ಣು ವ್ಯಾಪಾರಿ ಮಹಿಳೆ ಮೇಲೆ ಆ್ಯಸಿಡ್​ ದಾಳಿ

ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದ ಶಾಹು ಮಹಾರಾಜ ವೃತ್ತದ ಬಳಿ ಬಾಳೆ ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳೆ ಮೇಲೆ ಆ್ಯಸಿಡ್​​ ದಾಳಿ ಮಾಡಿರುವ ಘಟನೆ ರಾಯಬಾಗ ಪಟ್ಟಣದಲ್ಲಿ ನಡೆದಿದೆ.ಅಪರಿಚಿತನೋರ್ವ ಯಾಸ್ಮೀನ್​ ಮೇಲೆ ಆ್ಯಸಿಡ್​ ಚೆಲ್ಲಿ ಪರಾರಿಯಾಗಿದ್ದಾನೆ. ​
ಮಹಿಳೆಯ ಹೊಟ್ಟೆ ಹಾಗೂ ಕುತ್ತಿಗೆ ಭಾಗದಲ್ಲಿ ತೀವ್ರ ಗಾಯಗಾಳಾಗಿವೆ.

ಪಟ್ಟಣದ ಯಾಸ್ಮೀನ್​ ತಹಶಿಲ್ದಾರ (35) ಆ್ಯಸಿಡ್ ದಾಳಿಗೆ ತುತ್ತಾದ ​ಮಹಿಳೆ. ಇಲ್ಲಿನ ಶಾಹುಮಹಾರಾಜ ವೃತ್ತದ ಬಳಿ ಹಣ್ಣು ಮಾರಾಟ ಮಾಡುವ ವೇಳೆ ಅಪರಿಚಿತನೋರ್ವ ಯಾಸ್ಮೀನ್​ ಮೇಲೆ ಆ್ಯಸಿಡ್​ ಚೆಲ್ಲಿ ಪರಾರಿಯಾಗಿದ್ದಾನೆ. ​ಪರಿಣಾಮ ಮಹಿಳೆಯ ಹೊಟ್ಟೆ ಹಾಗೂ ಕುತ್ತಿಗೆ ಭಾಗದಲ್ಲಿ ತೀವ್ರ ಗಾಯಗಾಳಾಗಿವೆ.

ಆ್ಯಸಿಡ್​ ದಾಳಿಗೆ ತುತ್ತಾಗಿ ನರಳುತ್ತಿರವ ಮಹಿಳೆ
ಈಕೆಯ ನರಳಾಟ ಕೇಳಿದ ಸ್ಥಳೀಯರು ನೀರು ಸಿಂಪಡಿಸಿ, ಚಿಕಿತ್ಸೆಗಾಗಿ ಆ್ಯಂಬುಲೆನ್ಸ್​ನಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ.


Spread the love

About fast9admin

Check Also

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

Spread the loveಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ …

Leave a Reply

Your email address will not be published. Required fields are marked *