Breaking News

ಹಸಿರು ಶಾಲು ಹೊತ್ತು ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ : ಡಿಕೆಶಿ, ಸಿದ್ದರಾಮಯ್ಯ ಸಾಥ್

Spread the love

ಹಸಿರು ಶಾಲು ಹೊತ್ತು ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ : ಡಿಕೆಶಿ, ಸಿದ್ದರಾಮಯ್ಯ ಸಾಥ್

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಬೆಳಗಾವಿ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರಗೆ ವಾಹನದಲ್ಲಿ ಆಗಮಿಸಿ, ಅಲ್ಲಿಂದ ಚುನಾವಣಾಧಿಕಾರಿ ಕಚೇರಿಗೆ ನಡೆದುಕೊಂಡೇ ಹೋದರು.

ಹೆಗಲ ಮೇಲೆ ಹಸಿರು ಶಾಲು ಹೊತ್ತು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಶಾಸಕರು ಹಾಗೂ ಮುಖಂಡರಾದ ಎಂ.ಬಿ. ಪಾಟೀಲ, ಆರ್.ವಿ. ದೇಶಪಾಂಡೆ, ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಕೆಪಿಸಿಸಿ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ, ಮಾಜಿ ಶಾಸಕರಾದ ಪಿರೋಜ್ ಶೇಠ್, ಅಶೋಕ ಪಟ್ಟಣ ಸೇರಿದಂತೆ ಇತರ ಕಾಂಗ್ರೆಸ್ ಮುಂಖಡರು ಸಾಥ್ ನೀಡಿದರು.


Spread the love

About Fast9 News

Check Also

ಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,?

Spread the loveಚಿಕ್ಕೋಡಿ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಮಾಲೆ ಇಲ್ಲಿದೆ ಡಿಟೆಲ್ಸ್,,,? ಚಿಕ್ಕೋಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ fast9news …

Leave a Reply

Your email address will not be published. Required fields are marked *