Breaking News

ಕೊರೊನಾ ವಾರಿಯರ್ಸ್ ಗಳ ನೆರವಿಗೆ ಸದಾ ಸಿದ್ಧ:ರಾಹುಲ್ ಜಾರಕಿಹೊಳಿ

Spread the love

ಕೊರೊನಾ ವಾರಿಯರ್ಸ್ ಗಳ ನೆರವಿಗೆ ಸದಾ ಸಿದ್ಧ:ರಾಹುಲ್ ಜಾರಕಿಹೊಳಿ ಭರವಸೆ

ಗೋಕಾಕ: ಯಮಕನಮರಡಿ ಮತಕ್ಷೇತ್ರದ‌ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು ಹೇಳಿದರು.

“ಪ್ರತಿ ಹಳ್ಳಿಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪರೀಕ್ಷೆ ನಡೆಸಿ, ಕೂಡಲೇ ಸೋಂಕಿತರನ್ನು ಕೋವಿಡ್ ಕೇಂದ್ರಗಳಲ್ಲಿ ಐಸೊಲೇಟ್ ಮಾಡಿ, ಸೂಕ್ತ ಚಿಕಿತ್ಸೆ ನೀಡಬೇಕು. ಅಂದಾಗ ಕೊರೊನಾ ತ್ವರಿತವಾಗಿ ನಿಯಂತ್ರಣಕ್ಕೆ ಬರುತ್ತದೆ” ಎಂದರು.

ಕೊರೊನಾ ವಾರಿಯರ್ಸ್ ಗಳ ನೆರವಿಗೆ ಸದಾ ಸಿದ್ಧ:

‘ಕೊರೊನಾ ವಾರಿಯರ್ಸ್ ಗಳ ನೆರವಿಗೆ ನಾವು ಸದಾ ಸಿದ್ಧರಿದ್ದೇವೆ. ತಾವು ಯಾವಾಗ ಬೇಕಾದರು ನಮ್ಮ ಸಹಾಯ ಪಡೆಯಬಹುದು” ಎಂದು ರಾಹುಲ್ ಅವರು ಭರವಸೆ ನೀಡಿದರು.

ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಪಾಶ್ಚಾಪುರ, ದಡ್ಡಿ, ಕಾಕತಿ, ಹೆಬ್ಬಾಳ, ಕಡೋಲಿ ಹಾಗೂ ಹತ್ತರಗಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ  ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ವಿಠ್ಠಲ ಪರಸನ್ನವರ, ಮಾರುತಿ ಗುಟುಗುದ್ದಿ, ಪ್ರಕಾಶ ಬಸಾಪುರೆ, ವಿನೋದ ಡೊಂಗ್ರೆ, ಪಾಂಡು ರಂಗಸುಬೆ, ಸುರೇಶ ನಾಯ್ಕ್, ಅಲ್ಲಾ ಖಾನ ಸೇರಿ ಇನ್ನಿತರರು ಇದ್ದರು.


Spread the love

About fast9admin

Check Also

ದೃಶ್ಯ ಮಾದ್ಯಮಗಳ ಹೆಸರಿನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದರ್ಬಳಕೆ,ಹಪ್ತಾ ವಸೂಲಿಗೆ ಕಡಿವಾಣ ಹಾಕಲು ಮುಂದಾದ ಎಲೆಕ್ಟ್ರಾನಿಕ್ ಮಿಡಿಯಾ ಅಸೋಸಿಯೇಷನ್ ಜಿಲ್ಲಾಧಿಕಾರಿ ಮತ್ತು ಎಸ್,ಪಿ,ಗೆ ಮನವಿ

Spread the loveದೃಶ್ಯ ಮಾದ್ಯಮಗಳ ಹೆಸರಿನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ದರ್ಬಳಕೆ,ಹಪ್ತಾ ವಸೂಲಿಗೆ ಕಡಿವಾಣ ಹಾಕಲು ಮುಂದಾದ ಎಲೆಕ್ಟ್ರಾನಿಕ್ ಮಿಡಿಯಾ …

Leave a Reply

Your email address will not be published. Required fields are marked *